Siddhivinayaka Temple, 1980. Mumbai, Prabhadevi.
ಶರಣು ಸಿದ್ದಿ ವಿನಾಯಕ
ಶರಣು ವಿದ್ಯಾ ಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ
ಶರಣು ಮೂಷಕವಾಹನ
ನಿಟಿಲನೇತ್ರನ ದೇವಿ ಸುತನೆ
ನಾಗಭೂಷಣ ಪ್ರೀಯನೆ
ಕಟಿಕಟಾಂಗದ ಕೋಮಲಾಂಗನೆ
ಕರ್ಣಕುಂಡಲಧಾರನೆ
ಬಟುವ ಮುತ್ತಿನಹಾರ ಪದಕನೆ
ಬಾಹು ಹಸ್ತ ಚತುಷ್ಟನೇ
ಇಟ್ಟ ತೊಡುಗೆಯು ಹೇಮಕಂಕಣ
ಪಾಶದಂಕುಶಧಾರನೆ
ಕೂಕ್ಷಿ ಮಹಾಲಂಬೋದರನೆ
ಇಕ್ಷುಚಾಪನ ಗೆಲಿದನೆ
ಪಕ್ಷಿವಾಹನನಾದ ಪುರಂದರವಿಠಲನ ನಿಜದಾಸನೆ
ಶರಣು ವಿದ್ಯಾ ಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ
ಶರಣು ಮೂಷಕವಾಹನ
ನಿಟಿಲನೇತ್ರನ ದೇವಿ ಸುತನೆ
ನಾಗಭೂಷಣ ಪ್ರೀಯನೆ
ಕಟಿಕಟಾಂಗದ ಕೋಮಲಾಂಗನೆ
ಕರ್ಣಕುಂಡಲಧಾರನೆ
ಬಟುವ ಮುತ್ತಿನಹಾರ ಪದಕನೆ
ಬಾಹು ಹಸ್ತ ಚತುಷ್ಟನೇ
ಇಟ್ಟ ತೊಡುಗೆಯು ಹೇಮಕಂಕಣ
ಪಾಶದಂಕುಶಧಾರನೆ
ಕೂಕ್ಷಿ ಮಹಾಲಂಬೋದರನೆ
ಇಕ್ಷುಚಾಪನ ಗೆಲಿದನೆ
ಪಕ್ಷಿವಾಹನನಾದ ಪುರಂದರವಿಠಲನ ನಿಜದಾಸನೆ
ನಾನೇಕೆ ಬಡವನೊ ನಾನೇಕೆ ಪರದೇಶಿ
ಶ್ರೀನಿಧೇ ಹರಿ ಎನಗೆ ನೀನಿರುವ ತನಕ
ಪುಟ್ಟಿಸಿದ ತಾಯ್ತಂದೆ ಇಷ್ಟಮಿತ್ರನು ನೀನೆ
ಇಷ್ಟ ಬಂಧು ಬಳಗ ಸರ್ವ ನೀನೆ
ಪೆಟ್ಟಿಗೆಯೊಳಗಿನ ಅಷ್ಟಾಭರಣ ನೀನೆ
ಶ್ರೇಷ್ಠ ಮೂರುತಿ ಕೃಷ್ಣ ನೀನಿರುವತನಕ
ಒಡಹುಟ್ಟಿದವ ನೀನೆ ಒಡಲಹೊರೆವವ ನೀನೆ
ಉಡಲು ಹೊದೆಯಲು ವಸ್ತ್ರ ಕೊಡುವವ ನೀನೆ
ಮಡದಿ ಮಕ್ಕಳನೆಲ್ಲ ಕಡೆಹಾಯಿಸುವವ ನೀನೆ
ಬಿಡದೆ ಸಲಹುವ ಒಡೆಯ ನೀನಿರುವತನಕ
ವಿದ್ಯೆ ಹೇಳುವವ ನೀನೆ ಬುದ್ಧಿ ಕಲಿಸುವವ ನೀನೆ
ಉದ್ಧಾರಕರ್ತ ಮಮಸ್ವಾಮಿ ನೀನೆ
ಮುದ್ದು ಶ್ರೀ ಪುರಂದರವಿಠಲ ನಿನ್ನಡಿಮೇಲೆ
ಬಿದ್ದು ಕೊಂಡಿರುವತನಕ ಏತರ ಭಯವೊ
ಲಾಲಿಸಿದಳು ಮಗನ ಯಶೋದೆ ಲಾಲಿಸಿದಳು ಮಗನ
ಅರಳೆಲೆ ಮಾಗಾಯಿ ಬೆರಳಿಗುಂಗುರವಿಟ್ಟು
ತರಳನ ಮೈಸಿರಿ ತರುಣಿ ನೋಡುತ ಹಿಗ್ಗಿ
ಬಾಲಕನೆ ಕೆನೆ ಹಾಲು ಮೊಸರನೀವೆ
ಲೀಲೆಯಿಂದಲಿ ಎನ್ನ ತೋಳ ಮೇಲ್ಮಲಗೆಂದು
ಮುಗುಳು ನಗೆಯಿಂದ ಮುದ್ದು ತಾ ತಾರೆಂದು
ಜಗದೊಡೆಯನ ಶ್ರೀ ಪುರಂದರವಿಠಲನ
ಅರಳೆಲೆ ಮಾಗಾಯಿ ಬೆರಳಿಗುಂಗುರವಿಟ್ಟು
ತರಳನ ಮೈಸಿರಿ ತರುಣಿ ನೋಡುತ ಹಿಗ್ಗಿ
ಬಾಲಕನೆ ಕೆನೆ ಹಾಲು ಮೊಸರನೀವೆ
ಲೀಲೆಯಿಂದಲಿ ಎನ್ನ ತೋಳ ಮೇಲ್ಮಲಗೆಂದು
ಮುಗುಳು ನಗೆಯಿಂದ ಮುದ್ದು ತಾ ತಾರೆಂದು
ಜಗದೊಡೆಯನ ಶ್ರೀ ಪುರಂದರವಿಠಲನ
ಯಾರಿಗೆ ಯಾರುಂಟು ಎರವಿನ ಸಂಸಾರ
ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೇ
ಬಾಯಾರಿತು ಎಂದು ಬಾವಿನೀರಿಗೆ ಪೋದೆ
ಬಾವಿಲಿ ಜಲ ಬತ್ತಿ ಬರಿದಾಯ್ತು ಹರಿಯೆ
ಬಿಸಿಲು ಗಾಳಿಗಾಗಿ ಮರದ ನೆರಳಿಗೆ ಪೋದೆ
ಮರ ಬಗ್ಗಿ ಶಿರದ ಮೇಲೊರಗಿತೋ ಹರಿಯೆ
ಅಡವಿಯೊಳ್ಮನೆಮಾಡಿ ಗಿಡಕೆ ತೊಟ್ಟಿಲು ಕಟ್ಟಿ
ತೊಟ್ಟಿಲಿನ ಶಿಶು ಮಾಯವಾಯಿತು ಹರಿಯೆ
ತಂದೆ ಶ್ರೀ ಪುರಂದರವಿಠಲ ನಾರಾಯಣ
ನಾ ಸಾಯೊ ಹೊತ್ತಿಗೆ ನೀ ಕಾಯೊ ಹರಿಯೆ
ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೇ
ಬಾಯಾರಿತು ಎಂದು ಬಾವಿನೀರಿಗೆ ಪೋದೆ
ಬಾವಿಲಿ ಜಲ ಬತ್ತಿ ಬರಿದಾಯ್ತು ಹರಿಯೆ
ಬಿಸಿಲು ಗಾಳಿಗಾಗಿ ಮರದ ನೆರಳಿಗೆ ಪೋದೆ
ಮರ ಬಗ್ಗಿ ಶಿರದ ಮೇಲೊರಗಿತೋ ಹರಿಯೆ
ಅಡವಿಯೊಳ್ಮನೆಮಾಡಿ ಗಿಡಕೆ ತೊಟ್ಟಿಲು ಕಟ್ಟಿ
ತೊಟ್ಟಿಲಿನ ಶಿಶು ಮಾಯವಾಯಿತು ಹರಿಯೆ
ತಂದೆ ಶ್ರೀ ಪುರಂದರವಿಠಲ ನಾರಾಯಣ
ನಾ ಸಾಯೊ ಹೊತ್ತಿಗೆ ನೀ ಕಾಯೊ ಹರಿಯೆ
ಭಾಗ್ಯದ ಲಕ್ಷ್ಮಿ ಬಾರಮ್ಮ ನಮ್ಮಮ್ಮಾ ಶ್ರೀ
ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ
ಗೆಜ್ಜೆ ಕಾಲ್ಗಳ ಧ್ವನಿಯ ತೋರುತ
ಹೆಜ್ಜೆಯ ಮೇಲೆ ಹೆಜ್ಜೆಯ ನಿಕ್ಕುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ
ಕನಕ ವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ಧಿಯ ತೊರೆ
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ
ಶಂಕೆ ಇಲ್ಲದ ಭಾಗ್ಯವ ಕೊಡಲು
ಕಂಕಣ ಕೈಯ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜ ಲೋಚನೆ
ವೆಂಕಟರಮಣನ ಬಿಂಕದ ರಾಣಿ
ಅತ್ತಿತ್ತಗಲದೆ ಭಕ್ತರ ಮನೆಯೊಳು
ನಿತ್ಯ ಮಹೋತ್ಸವ ನಿತ್ಯ ಸುಮಂಗಲ
ಸತ್ಯದಿ ತೋರುತ ಸಾಧು ಸಜ್ಜನರಾ
ಚಿತ್ತದಿ ಹೊಳೆಯುವ ಪುತ್ತಳಿ ಗೊಂಬೆ
ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಆಳಗಿರಿ ರಂಗನ
ಚೊಕ್ಕ ಪುರಂದರವಿಠಲನ ರಾಣಿ
ಸೌಭಾಗ್ಯದ ಲಕ್ಷ್ಮಿ ಬಾರಮ್ಮಾ
ಗೆಜ್ಜೆ ಕಾಲ್ಗಳ ಧ್ವನಿಯ ತೋರುತ
ಹೆಜ್ಜೆಯ ಮೇಲೆ ಹೆಜ್ಜೆಯ ನಿಕ್ಕುತ
ಸಜ್ಜನ ಸಾಧು ಪೂಜೆಯ ವೇಳೆಗೆ
ಮಜ್ಜಿಗೆಯೊಳಗಿನ ಬೆಣ್ಣೆಯಂತೆ
ಕನಕ ವೃಷ್ಟಿಯ ಕರೆಯುತ ಬಾರೆ
ಮನಕಾಮನೆಯ ಸಿದ್ಧಿಯ ತೊರೆ
ದಿನಕರ ಕೋಟಿ ತೇಜದಿ ಹೊಳೆಯುವ
ಜನಕರಾಯನ ಕುಮಾರಿ ಬೇಗ
ಶಂಕೆ ಇಲ್ಲದ ಭಾಗ್ಯವ ಕೊಡಲು
ಕಂಕಣ ಕೈಯ ತಿರುವುತ ಬಾರೆ
ಕುಂಕುಮಾಂಕಿತೆ ಪಂಕಜ ಲೋಚನೆ
ವೆಂಕಟರಮಣನ ಬಿಂಕದ ರಾಣಿ
ಅತ್ತಿತ್ತಗಲದೆ ಭಕ್ತರ ಮನೆಯೊಳು
ನಿತ್ಯ ಮಹೋತ್ಸವ ನಿತ್ಯ ಸುಮಂಗಲ
ಸತ್ಯದಿ ತೋರುತ ಸಾಧು ಸಜ್ಜನರಾ
ಚಿತ್ತದಿ ಹೊಳೆಯುವ ಪುತ್ತಳಿ ಗೊಂಬೆ
ಸಕ್ಕರೆ ತುಪ್ಪದ ಕಾಲುವೆ ಹರಿಸಿ
ಶುಕ್ರವಾರದ ಪೂಜೆಯ ವೇಳೆಗೆ
ಅಕ್ಕರೆಯುಳ್ಳ ಆಳಗಿರಿ ರಂಗನ
ಚೊಕ್ಕ ಪುರಂದರವಿಠಲನ ರಾಣಿ
ದೇವ ಬಂದ ನಮ್ಮ ಸ್ವಾಮಿ ಬಂದನೊ
ದೇವರ ದೇವ ಶಿಖಾಮಣಿ ಬಂದನೊ
ಉರಗಶಯನ ಬಂದ ಗರುಡಗಮನ ಬಂದ
ನರಗೊಲಿದವ ಬಂದ ನಾರಾಯಣ ಬಂದ
ಮಂದರೋದ್ದರ ಬಂದ ಮಾಮನೋಹರ ಬಂದ
ಬೃಂದಾವನಪತಿ ಗೋವಿಂದ ಬಂದನೊ
ನಕ್ರಹರನು ಬಂದ ಚಕ್ರಧರನು ಬಂದ
ಅಕ್ರೂರಗೊಲಿದ ತ್ರಿವಿಕ್ರಮ ಬಂದನೊ
ಪಕ್ಷಿವಾಹನ ಬಂದ ಲಕ್ಷ್ಮಣಾಗ್ರಜ ಬಂದ
ಅಕ್ಷಯ ಫಲದ ಶ್ರೀ ಲಕ್ಷ್ಮೀರಮಣ ಬಂದನೊ
ನಿಗಮಗೋಚರ ಬಂದ ನಿತ್ಯತೃಪ್ತನು ಬಂದ
ನಗೆಮುಖ ಪುರಂದರವಿಠಲ ಬಂದನೊ
ದೇವರ ದೇವ ಶಿಖಾಮಣಿ ಬಂದನೊ
ಉರಗಶಯನ ಬಂದ ಗರುಡಗಮನ ಬಂದ
ನರಗೊಲಿದವ ಬಂದ ನಾರಾಯಣ ಬಂದ
ಮಂದರೋದ್ದರ ಬಂದ ಮಾಮನೋಹರ ಬಂದ
ಬೃಂದಾವನಪತಿ ಗೋವಿಂದ ಬಂದನೊ
ನಕ್ರಹರನು ಬಂದ ಚಕ್ರಧರನು ಬಂದ
ಅಕ್ರೂರಗೊಲಿದ ತ್ರಿವಿಕ್ರಮ ಬಂದನೊ
ಪಕ್ಷಿವಾಹನ ಬಂದ ಲಕ್ಷ್ಮಣಾಗ್ರಜ ಬಂದ
ಅಕ್ಷಯ ಫಲದ ಶ್ರೀ ಲಕ್ಷ್ಮೀರಮಣ ಬಂದನೊ
ನಿಗಮಗೋಚರ ಬಂದ ನಿತ್ಯತೃಪ್ತನು ಬಂದ
ನಗೆಮುಖ ಪುರಂದರವಿಠಲ ಬಂದನೊ
ಪಿಳ್ಳಂಗೋವಿಯ ಚೆಲ್ವ ಕೃಷ್ಣನ
ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿ
ಎಲ್ಲಿ ನೋಡಿದರಲ್ಲಿ ತಾನಿಲ್ಲದಿಲ್ಲವೆಂದು ಬಲ್ಲ ಜಾಣರು
ನಂದಗೋಪನ ಮಂದಿರಂಗಳ ಸಂದುಗೊಂದಿನಲಿ
ಚೆಂದ ಚೆಂದದ ಗೋಪಬಾಲರ ವೃಂದವೃಂದದಲಿ
ಸುಂದಾರಾಂಗದೆ ಸುಂದರಿಯರ ಹಿಂದುಮುಂದಿನಲಿ
ಅಂದದಾಕಳ ಕಂದಕರುಗಳ ಮಂದೆ ಮಂದೆಯಲಿ
ಶ್ರೀಗುರೂಕ್ತ ಸದಾ ಸುಮಂಗಳ ಯೋಗ ಯೋಗದಲಿ
ಆಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
ಭಾಗವತರು ಸದಾ ಬಾಗಿ ಪಾಡುವ ರಾಗ ರಾಗದಲಿ
ಈ ಚರಾಚರದೊಳಗೆ ಜನಂಗಳಾಚೆ ಈಚೆಯಲಿ
ಖೇಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ ಎಂಬ ಭಕ್ತರ ವಾಚಕಂಗಳಲಿ
ವೀಚುಕೊಡದ ಪುರಂದರವಿಠಲನ ಲೋಚನಾಗ್ರಹದಲಿ
ಎಲ್ಲಿ ನೋಡಿದಿರಿ ರಂಗನ ಎಲ್ಲಿ ನೋಡಿದಿರಿ
ಎಲ್ಲಿ ನೋಡಿದರಲ್ಲಿ ತಾನಿಲ್ಲದಿಲ್ಲವೆಂದು ಬಲ್ಲ ಜಾಣರು
ನಂದಗೋಪನ ಮಂದಿರಂಗಳ ಸಂದುಗೊಂದಿನಲಿ
ಚೆಂದ ಚೆಂದದ ಗೋಪಬಾಲರ ವೃಂದವೃಂದದಲಿ
ಸುಂದಾರಾಂಗದೆ ಸುಂದರಿಯರ ಹಿಂದುಮುಂದಿನಲಿ
ಅಂದದಾಕಳ ಕಂದಕರುಗಳ ಮಂದೆ ಮಂದೆಯಲಿ
ಶ್ರೀಗುರೂಕ್ತ ಸದಾ ಸುಮಂಗಳ ಯೋಗ ಯೋಗದಲಿ
ಆಗಮಾರ್ಥದೊಳಗೆ ಮಾಡುವ ಯಾಗ ಯಾಗದಲಿ
ಶ್ರೀಗೆ ಭಾಗ್ಯನಾಗಿ ವರ್ತಿಪ ಭೋಗ ಭೋಗದಲಿ
ಭಾಗವತರು ಸದಾ ಬಾಗಿ ಪಾಡುವ ರಾಗ ರಾಗದಲಿ
ಈ ಚರಾಚರದೊಳಗೆ ಜನಂಗಳಾಚೆ ಈಚೆಯಲಿ
ಖೇಚರೇಂದ್ರನ ಸುತನ ರಥದ ಚೌಕ ಪೀಠದಲಿ
ನಾಚದೆ ಮಾಧವ ಎಂಬ ಭಕ್ತರ ವಾಚಕಂಗಳಲಿ
ವೀಚುಕೊಡದ ಪುರಂದರವಿಠಲನ ಲೋಚನಾಗ್ರಹದಲಿ
ಕಂಡೆ ನಾ ಗೋವಿಂದನ
ಪುಂಡರೀಕಾಕ್ಷ ಪಾಂಡವಪಕ್ಷ ಕೃಷ್ಣನ
ಕೇಶವ ನಾರಾಯಣ ಶ್ರೀಕೃಷ್ಣನ
ವಾಸುದೇವ ಅಚ್ಯ್ತುತಾನಂತನ
ಸಾಸಿರನಾಮನ ಶ್ರೀ ಹೃಷೀಕೇಶನ
ಶೇಷಶಯನ ನಮ್ಮ ವಸುದೇವಸುತನ
ಮಾಧವ ಮಧುಸೂದನ ತ್ರಿವಿಕ್ರಮ
ಯಾದವಕುಲ ಜನ ಮುನಿವಂದ್ಯನ
ವೇದಾಂತವೇದ್ಯನ ಇಂದಿರಾರಮಣನ
ಆದಿಮೂರುತಿ ಪ್ರಹ್ಲಾದವರದನ
ಪುರುಷೋತ್ತಮ ನರಹರಿ ಶ್ರೀಕೃಷ್ಣನ
ಶರಣಾಗತ ವಜ್ರಪಂಜರನ
ಕರುಣಾಕರ ನಮ್ಮ ಪುರಂದರವಿಠಲನ
ನೆರೆ ನಂಬಿದೆ ಬೇಲೂರ ಕೇಶವನ
ಪುಂಡರೀಕಾಕ್ಷ ಪಾಂಡವಪಕ್ಷ ಕೃಷ್ಣನ
ಕೇಶವ ನಾರಾಯಣ ಶ್ರೀಕೃಷ್ಣನ
ವಾಸುದೇವ ಅಚ್ಯ್ತುತಾನಂತನ
ಸಾಸಿರನಾಮನ ಶ್ರೀ ಹೃಷೀಕೇಶನ
ಶೇಷಶಯನ ನಮ್ಮ ವಸುದೇವಸುತನ
ಮಾಧವ ಮಧುಸೂದನ ತ್ರಿವಿಕ್ರಮ
ಯಾದವಕುಲ ಜನ ಮುನಿವಂದ್ಯನ
ವೇದಾಂತವೇದ್ಯನ ಇಂದಿರಾರಮಣನ
ಆದಿಮೂರುತಿ ಪ್ರಹ್ಲಾದವರದನ
ಪುರುಷೋತ್ತಮ ನರಹರಿ ಶ್ರೀಕೃಷ್ಣನ
ಶರಣಾಗತ ವಜ್ರಪಂಜರನ
ಕರುಣಾಕರ ನಮ್ಮ ಪುರಂದರವಿಠಲನ
ನೆರೆ ನಂಬಿದೆ ಬೇಲೂರ ಕೇಶವನ
ಕಂಡು ಕಂಡು ನೀ ಎನ್ನ ಕೈ ಬಿಡುವರೇ
ಪುಂಡರೀಕಾಕ್ಷ ಪುರುಷೋತ್ತಮ ಹರೇ
ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ
ನಿಂದೆಯಲಿ ನೊಂದೆನೈ ನೀರಜಾಕ್ಷ
ತಂದೆತಾಯಿಯು ನೀನೆ ಬಂಧುಬಳಗವು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ
ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ
ಎಣಿಸಲಾರದ ಭವದಿ ನೊಂದೆ ನಾನು
ಸನಕಾದಿಮುನಿವಂದ್ಯ ವನಜಸಂಭವ ಜನಕ
ಫಣಿಶಾಯಿ ಪ್ರಹ್ಲಾದವರದ ಶ್ರೀಕೃಷ್ಣಾ
ಭಕ್ತವತ್ಸಲನೆಂಬೊ ಬಿರುದು ಪೊತ್ತಾ ಮೇಲೆ
ಭಕ್ತರಾಧೀನನಾಗಿರಬೇಡವೆ
ಮುಕ್ತಿದಾಯಕ ನೀನು ಹೊನ್ನೂರುಪುರವಾಸ
ಶಕ್ತಗುರು ಪುರಂದರವಿಠಲ
ಪುಂಡರೀಕಾಕ್ಷ ಪುರುಷೋತ್ತಮ ಹರೇ
ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ
ನಿಂದೆಯಲಿ ನೊಂದೆನೈ ನೀರಜಾಕ್ಷ
ತಂದೆತಾಯಿಯು ನೀನೆ ಬಂಧುಬಳಗವು ನೀನೆ
ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣಾ
ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ
ಎಣಿಸಲಾರದ ಭವದಿ ನೊಂದೆ ನಾನು
ಸನಕಾದಿಮುನಿವಂದ್ಯ ವನಜಸಂಭವ ಜನಕ
ಫಣಿಶಾಯಿ ಪ್ರಹ್ಲಾದವರದ ಶ್ರೀಕೃಷ್ಣಾ
ಭಕ್ತವತ್ಸಲನೆಂಬೊ ಬಿರುದು ಪೊತ್ತಾ ಮೇಲೆ
ಭಕ್ತರಾಧೀನನಾಗಿರಬೇಡವೆ
ಮುಕ್ತಿದಾಯಕ ನೀನು ಹೊನ್ನೂರುಪುರವಾಸ
ಶಕ್ತಗುರು ಪುರಂದರವಿಠಲ
ಗುಮ್ಮನ ಕರೆಯದಿರೆ ಅಮ್ಮ ನೀನು
ಸುಮ್ಮನೆ ಇದ್ದೇನು ಅಮ್ಮಿಯ ಬೇಡೆನು
ಮಮ್ಮು ಉಣ್ಣುತೇನೆ ಅಮ್ಮ ಅಳುವುದಿಲ್ಲ
ಹೆಣ್ಣುಗಳಿರುವಲ್ಲಿ ಪೋಗಿ ಅವರ
ಕಣ್ಣು ಮುಚ್ಚುವದಿಲ್ಲವೆ
ಚಿಣ್ಣರ ಬಡಿಯೆನು, ಅಣ್ಣನ ಬೈಯೆನು
ಬೆಣ್ಣೆಯ ಬೇಡೆನು ಮಣ್ಣು ತಿನ್ನುವುದಿಲ್ಲ
ಬಾವಿಗೆ ಪೋಗೆ ಕಾಣೆ ಅಮ್ಮ ನಾನು
ಹಾವಿನೊಳಾಡೆ ಕಾಣೆ
ಆವಿನ ಮೊಲೆಯೂಡೆ ಕರುಗಳ ಬಿಡೆ ನೋಡೆ
ದೇವರಂತೆ ಒಂದು ಠಾವಿಲಿ ಕೂಡುವೆ
ಮಗನ ಮಾತ ಕೇಳಿ ಗೋಪಿದೇವಿ
ಮುಗುಳು ನಗೆ ನಗುತ
ಜಗದೊಡೆಯನ ಶ್ರೀ ಪುರಂದರವಿಠಲನ
ಬಿಗಿದಪ್ಪಿಕೊಂಡಳು ಮೋಹದಿಂದಲಾಗ
ಸುಮ್ಮನೆ ಇದ್ದೇನು ಅಮ್ಮಿಯ ಬೇಡೆನು
ಮಮ್ಮು ಉಣ್ಣುತೇನೆ ಅಮ್ಮ ಅಳುವುದಿಲ್ಲ
ಹೆಣ್ಣುಗಳಿರುವಲ್ಲಿ ಪೋಗಿ ಅವರ
ಕಣ್ಣು ಮುಚ್ಚುವದಿಲ್ಲವೆ
ಚಿಣ್ಣರ ಬಡಿಯೆನು, ಅಣ್ಣನ ಬೈಯೆನು
ಬೆಣ್ಣೆಯ ಬೇಡೆನು ಮಣ್ಣು ತಿನ್ನುವುದಿಲ್ಲ
ಬಾವಿಗೆ ಪೋಗೆ ಕಾಣೆ ಅಮ್ಮ ನಾನು
ಹಾವಿನೊಳಾಡೆ ಕಾಣೆ
ಆವಿನ ಮೊಲೆಯೂಡೆ ಕರುಗಳ ಬಿಡೆ ನೋಡೆ
ದೇವರಂತೆ ಒಂದು ಠಾವಿಲಿ ಕೂಡುವೆ
ಮಗನ ಮಾತ ಕೇಳಿ ಗೋಪಿದೇವಿ
ಮುಗುಳು ನಗೆ ನಗುತ
ಜಗದೊಡೆಯನ ಶ್ರೀ ಪುರಂದರವಿಠಲನ
ಬಿಗಿದಪ್ಪಿಕೊಂಡಳು ಮೋಹದಿಂದಲಾಗ
ಪೋಗದಿರೆಲೊ ರಂಗ ಬಾಗಿಲಿಂದಾಚೆಗೆ
ಭಾಗವತರು ಕಂಡರೆತ್ತಿಕೊಂಡೊಯ್ವರೊ
ಸುರಮುನಿಗಳು ತಮ್ಮ ಹೃದಯಗಹ್ವರದಲ್ಲಿ
ಪರಮಾತ್ಮನ ಕಾಣದರಸುವರೊ
ದೊರಕದ ವಸ್ತುವು ದೊರಕಿತು ತಮಗೆಂದು
ಹರುಷದಿಂದಲಿ ನಿನ್ನ ಕರೆದೆತ್ತಿಕೊಂಬರೊ
ಅಗಣಿತಗುಣ ನಿನ್ನ ಜಗದ ನಾರಿಯರೆಲ್ಲ
ಹಗೆಯಾಗಿ ನುಡಿವರೊ ಗೋಪಾಲನೆ
ಮಗುಗಳ ಮಾಣಿಕ್ಯ ತಗುಲಿತು ಕರಕೆಂದು
ಬೇಗದಿಂದಲಿ ಬಂದು ಬಿಗಿದಪ್ಪಿಕೊಂಬರೊ
ಧಿಟ್ಟ ನಾರಿಯರೆಲ್ಲ ಇಷ್ಟವ ಸಲಿಸೆಂದು
ಅಟ್ಟಟ್ಟಿ ಬೆನ್ಹಿಂದೆ ತಿರುಗುವರೊ
ಸೃಷ್ಟೀಶ ಪುರಂದರವಿಠಲರಾಯನೆ
ಇಷ್ಟಿಷ್ಟು ಬೆಣ್ಣೆಯ ಕೊಟ್ಟೇನೊ ರಂಗಯ್ಯ
ಭಾಗವತರು ಕಂಡರೆತ್ತಿಕೊಂಡೊಯ್ವರೊ
ಸುರಮುನಿಗಳು ತಮ್ಮ ಹೃದಯಗಹ್ವರದಲ್ಲಿ
ಪರಮಾತ್ಮನ ಕಾಣದರಸುವರೊ
ದೊರಕದ ವಸ್ತುವು ದೊರಕಿತು ತಮಗೆಂದು
ಹರುಷದಿಂದಲಿ ನಿನ್ನ ಕರೆದೆತ್ತಿಕೊಂಬರೊ
ಅಗಣಿತಗುಣ ನಿನ್ನ ಜಗದ ನಾರಿಯರೆಲ್ಲ
ಹಗೆಯಾಗಿ ನುಡಿವರೊ ಗೋಪಾಲನೆ
ಮಗುಗಳ ಮಾಣಿಕ್ಯ ತಗುಲಿತು ಕರಕೆಂದು
ಬೇಗದಿಂದಲಿ ಬಂದು ಬಿಗಿದಪ್ಪಿಕೊಂಬರೊ
ಧಿಟ್ಟ ನಾರಿಯರೆಲ್ಲ ಇಷ್ಟವ ಸಲಿಸೆಂದು
ಅಟ್ಟಟ್ಟಿ ಬೆನ್ಹಿಂದೆ ತಿರುಗುವರೊ
ಸೃಷ್ಟೀಶ ಪುರಂದರವಿಠಲರಾಯನೆ
ಇಷ್ಟಿಷ್ಟು ಬೆಣ್ಣೆಯ ಕೊಟ್ಟೇನೊ ರಂಗಯ್ಯ
ಆಚಾರವಿಲ್ಲದ ನಾಲಿಗೆ ನಿನ್ನ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಸುವುದಕ್ಕೆ
ಚಾಚಿಕೊಂಡಿರುವಂತ ನಾಲಿಗೆ
ಪ್ರಾತಃಕಾಲದೊಳೆದ್ದು ನಾಲಿಗೆ ಸಿರಿ-
ಪತಿಯೆನ್ನಬಾರದೆ ನಾಲಿಗೆ
ಪತಿತ ಪಾವನ ನಮ್ಮ ರತಿಪತಿ ಜನಕನ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲಿಬೇಡ ನಾಲಿಗೆ ನಿನ್ನ
ಬೇಡಿಕೊಂಬುವೆನು ನಾಲಿಗೆ
ರೂಢಿಗೊಡಯ ಶ್ರೀರಾಮನ ನಾಮವ
ಪಾಡುತಲಿರು ಕಂಡ್ಯ ನಾಲಿಗೆ
ಹರಿಯ ಸ್ಮರಣೆ ಮಾಡು ನಾಲಿಗೆ ನರ-
ಹರಿಯ ಭಜಿಸು ಕಂಡ್ಯ ನಾಲಿಗೆ
ವರದ ಪುರಂದರವಿಟ್ಠಲರಾಯನ
ಚರಣಕಮಲವ ನೆನೆ ನಾಲಿಗೆ
ನೀಚ ಬುದ್ಧಿಯ ಬಿಡು ನಾಲಿಗೆ
ವಿಚಾರವಿಲ್ಲದೆ ಪರರ ದೂಷಿಸುವುದಕ್ಕೆ
ಚಾಚಿಕೊಂಡಿರುವಂತ ನಾಲಿಗೆ
ಪ್ರಾತಃಕಾಲದೊಳೆದ್ದು ನಾಲಿಗೆ ಸಿರಿ-
ಪತಿಯೆನ್ನಬಾರದೆ ನಾಲಿಗೆ
ಪತಿತ ಪಾವನ ನಮ್ಮ ರತಿಪತಿ ಜನಕನ
ಸತತವು ನುಡಿ ಕಂಡ್ಯ ನಾಲಿಗೆ
ಚಾಡಿ ಹೇಳಲಿಬೇಡ ನಾಲಿಗೆ ನಿನ್ನ
ಬೇಡಿಕೊಂಬುವೆನು ನಾಲಿಗೆ
ರೂಢಿಗೊಡಯ ಶ್ರೀರಾಮನ ನಾಮವ
ಪಾಡುತಲಿರು ಕಂಡ್ಯ ನಾಲಿಗೆ
ಹರಿಯ ಸ್ಮರಣೆ ಮಾಡು ನಾಲಿಗೆ ನರ-
ಹರಿಯ ಭಜಿಸು ಕಂಡ್ಯ ನಾಲಿಗೆ
ವರದ ಪುರಂದರವಿಟ್ಠಲರಾಯನ
ಚರಣಕಮಲವ ನೆನೆ ನಾಲಿಗೆ
ಜಗದುದ್ಧಾರನ ಆಡಿಸಿದಳೆಶೋದೆ
ಜಗದುದ್ಧಾರನ ಮಗನೆಂದು ತಿಳಿಯುತ
ಸುಗುಣಾಂತರಂಗನ ಆಡಿಸಿದಳೆಶೋದೆ
ನಿಗಮಕೆ ಸಿಲುಕದ ಅಗಣಿತ ಮಹಿಮನ
ಮಗುಗಳ ಮಾಣಿಕ್ಯನಾಡಿಸಿದಳೆಶೋದೆ
ಅಣೋರಣೀಯನ ಮಹತೋಮಹೀಯನ
ಅಪ್ರಮೇಯನ ಆಡಿಸಿದಳೆಶೋದೆ
ಪರಮಪುರುಷನ ಪರವಾಸುದೇವನ
ಪುರಂದರವಿಠಲನ ಆಡಿಸಿಳೆಶೋದೆ
ಜಗದುದ್ಧಾರನ ಮಗನೆಂದು ತಿಳಿಯುತ
ಸುಗುಣಾಂತರಂಗನ ಆಡಿಸಿದಳೆಶೋದೆ
ನಿಗಮಕೆ ಸಿಲುಕದ ಅಗಣಿತ ಮಹಿಮನ
ಮಗುಗಳ ಮಾಣಿಕ್ಯನಾಡಿಸಿದಳೆಶೋದೆ
ಅಣೋರಣೀಯನ ಮಹತೋಮಹೀಯನ
ಅಪ್ರಮೇಯನ ಆಡಿಸಿದಳೆಶೋದೆ
ಪರಮಪುರುಷನ ಪರವಾಸುದೇವನ
ಪುರಂದರವಿಠಲನ ಆಡಿಸಿಳೆಶೋದೆ
ಕಲ್ಲುಸಕ್ಕರೆ ಕೊಳ್ಳಿರೋ ನೀವೆಲ್ಲರು
ಕಲ್ಲುಸಕ್ಕರೆ ಕೊಳ್ಳಿರೋ
ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀಕೃಷ್ಣನಾಮವೆಂಬ
ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳು ತುಂಬುವದಲ್ಲ
ಎತ್ತ ಹೋದರು ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ಬರುವಂಥ
ನಷ್ಟ ಬೀಳುವುದಲ್ಲ ನಾತ ಹುಟ್ಟುವುದಲ್ಲ
ಎಷ್ಟು ಒಯ್ಡರು ಬೆಲೆ ರೊಕ್ಕವಿದಕಿಲ್ಲ
ಕಟ್ಟಿರುವೆಯು ತಿಂದು ಕಡಮೆಯಾಗುವುದಲ್ಲ
ಪಟ್ಟಣದೊಳಗೆ ಪ್ರಸಿದ್ದವಾಗಿರುವಂಥ
ಸಂತೆ ಸಂತೆಗೆ ಹೋಗಿ ಶ್ರಮಪಡುವುದಲ್ಲ
ಸಂತೆಯೊಳಗೆ ಇಟ್ಟು ಮಾರುವುದಲ್ಲ
ಸಂತತ ಭಕ್ತರ ನಾಲಗೆ ಸವಿಗೊಂಬ
ಕಾಂತ ಪುರಂದರವಿಠಲ ನಾಮವೆಂಬ
ಕಲ್ಲುಸಕ್ಕರೆ ಕೊಳ್ಳಿರೋ
ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀಕೃಷ್ಣನಾಮವೆಂಬ
ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳು ತುಂಬುವದಲ್ಲ
ಎತ್ತ ಹೋದರು ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ಬರುವಂಥ
ನಷ್ಟ ಬೀಳುವುದಲ್ಲ ನಾತ ಹುಟ್ಟುವುದಲ್ಲ
ಎಷ್ಟು ಒಯ್ಡರು ಬೆಲೆ ರೊಕ್ಕವಿದಕಿಲ್ಲ
ಕಟ್ಟಿರುವೆಯು ತಿಂದು ಕಡಮೆಯಾಗುವುದಲ್ಲ
ಪಟ್ಟಣದೊಳಗೆ ಪ್ರಸಿದ್ದವಾಗಿರುವಂಥ
ಸಂತೆ ಸಂತೆಗೆ ಹೋಗಿ ಶ್ರಮಪಡುವುದಲ್ಲ
ಸಂತೆಯೊಳಗೆ ಇಟ್ಟು ಮಾರುವುದಲ್ಲ
ಸಂತತ ಭಕ್ತರ ನಾಲಗೆ ಸವಿಗೊಂಬ
ಕಾಂತ ಪುರಂದರವಿಠಲ ನಾಮವೆಂಬ
ಹರಿದಾಸರೇಣ್ಯರೆಂದು ಹೆಸರುವಾಸಿಯಾಗಿರುವ ಪುರಂದರದಾಸರ ಪೂರ್ವ ನಾಮ ಶ್ರೀನಿವಾಸನಾಯಕ. ಈತ ನವಕೋಟಿ ನಾರಾಯಣನೆನ್ನಿಸಿ ಅತ್ಯಂತ ಶ್ರೀಮಂತನಾಗಿದ್ದನು. ಈತನ ಹೆಂಡತಿಯ ಹೆಸರು ಸರಸ್ವತೀಬಾಯಿ.
ಶ್ರೀನಿವಾಸನಾಯಕರು ಆಗರ್ಭ ಶ್ರೀಮಂತರಾಗಿದ್ದರೂ ತುಂಬ ಜಿಪುಣರಾಗಿದ್ದರು. ಆತನ ಪತ್ನಿ ಸರಸ್ವತಿಬಾಯಿಯಾದರೋ ಪರಮ ದೈವಭಕ್ತಳು. ಶ್ರೀನಿವಾಸನಾಯಕರಿಗೆ ಜ್ನಾನೋದಯವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಭಗವಂತನು ಬಡಬ್ರಾಹ್ಮಣನ ವೇಷವನ್ನು ಧರಿಸಿ ಒಬ್ಬ ಹುಡುಗನೊಂದಿಗೆ ಕೂಡಿ, ತನ್ನ ಮಗನಿಗೆ ಬ್ರಹ್ಮೋಪದೇಶವನ್ನು ಮಾಡಿಸುವ ಸಲುವಾಗಿ ಧನಸಹಾಯ ಮಾಡಬೇಕೆಂದು ಶ್ರೀನಿವಾಸನಾಯಕರಲ್ಲಿ ಬಂದು ಯಾಚಿಸಿದನು.
ಶ್ರೀನಿವಾಸನಾಯಕರು ತಮ್ಮ ಸ್ವಭಾವಕ್ಕೆ ಅನುಗುಣವಾಗಿ, ಆ ಬ್ರಾಹ್ಮಣನನ್ನು ಹಲವಾರು ಬಾರಿ ಅಲೆದಾಡಿಸಿ ಕಡೆಗೆ ಒಂದು ಸವಕಲು ನಾಣ್ಯವನ್ನು ಕೊಟ್ಟರು. ಖಿನ್ನನಾದ ಬಡ ಬ್ರಾಹ್ಮಣನು ಸರಸ್ವತಿಬಾಯಿಯಲ್ಲಿಗೆ ಬಂದು ತನ್ನ ಮನೋಭಿಪ್ರಾಯವನ್ನು ತಿಳಿಸಿದನು. ಆಕೆಯ ಮನಸ್ಸು ಕರಗಿತು. ಮೊದಮೊದಲು ದಿಕ್ಕು ತೋಚದಂತಾಯಿತು. ಕಡೆಗೆ ತನ್ನ ತವರಿನವರು ತನಗೆ ಕೊಟ್ಟಿದ್ದ ಮುತ್ತಿನ ಮೂಗುತಿಯನ್ನು ಆ ಬ್ರಾಹ್ಮಣನಿಗೆ ಕೊಟ್ಟು ಕಳುಹಿಸಿದಳು.
ವೇಶಧಾರಿಯಾದ ಆ ಬ್ರಾಹ್ಮಣನು ಆ ಒಡವೆಯನ್ನು ಅಡವಿಟ್ಟು ಹಣವನ್ನು ಪಡೆಯಲೆಂದು ಶ್ರೀನಿವಾಸರಲ್ಲಿಗೇ ಬಂದನು. ಕುಶಾಗ್ರಮತಿಯಾದ ಶ್ರೀನಿವಾಸನಾಯಕರು, ಆ ಒಡವೆ ಯಾರದಿರಬಹುದೆಂದು ಊಹಿಸಿ, ಒಡನೆಯೇ ಮನೆಗೆ ಬಂದು, ನಿಜವೃತ್ತಾಂತವನ್ನು ತಿಳಿದು, ಹೆಂಡತಿಯನ್ನು ದಂಡಿಸಿದರು.
ಆಕೆ ಅಸಹಾಯಕಳಾಗಿ ಪರಮಾತ್ಮನನ್ನು ಪ್ರಾರ್ಥಿಸಿದಳು. ಗಂಡನ ಆಗ್ರಹವನ್ನು ಎದುರಿಸಲಾಗದೆ, ತನ್ನ ಪ್ರಾಣವನ್ನೇ ತ್ಯಾಗಮಾಡಬೇಕೆಂದು ವಿಷವನ್ನು ಕುಡಿಯಲು ಬಟ್ಟಲನ್ನು ಮೇಲಕ್ಕೆ ಎತ್ತಿದಾಗ ಅದರಲ್ಲಿ ಆಕೆಯ ಮೂಗುತಿ ಬಿದ್ದಿದ್ದು ಗೋಚರಿಸಿತು. ಈ ಸೋಜಿಗವನ್ನು ಮನಗಂಡ ಶ್ರೀನಿವಾಸನಾಯಕರಿಗೆ ತಮ್ಮ ಅಜ್ಞಾನ ಸರಿದು, ಬಂದಾತ ಭಗವಂತನಿರಬೇಕೆಂದು ಧೃಡವಾಯಿತು. ಆ ಕ್ಷಣವೇ ತಮ್ಮ ಆಸ್ತಿ ಪಾಸ್ತಿಗಳೆನ್ನೆಲ್ಲ ಶ್ರಿಷ್ಣಾರ್ಪಣವೆಂದು ದೇವರಿಗೆ ಸಲ್ಲಿಸಿ ವಿರಕ್ತರಾದರು.
"ಆದದ್ದೆಲ್ಲ ಒಳಿತೇ ಆಯಿತು ನಮ್ಮ ಶ್ರೀಧರನ ಸೇವೆಗೆ ಸಾಧನ ಸಂಪತ್ತಾಯಿತು" ಎಂದು ಹಿಗ್ಗಿ ಹಾಡುತ್ತಾ ತಮಗೆ ಜ್ಞಾನೋದಯವನ್ನು ಉಂಟು ಮಾಡಿದ ತಮ್ಮ ಹೆಂಡತಿಯನ್ನು ಮುಕ್ತ ಕಂಠದಿಂದ ಕೊಂಡಾಡಿದರು. ಅನಂತರ ಶ್ರೀವ್ಯಾಸರಾಯರಲ್ಲಿಗೆ ಹೋಗಿ "ಪುರಂದರ ವಿಠಲ" ಎಂಬ ಅಂಕಿತವನ್ನು ಪಡೆದು ತಮ್ಮ ಕೀರ್ತನ ಕೈಂಕರ್ಯವನ್ನು ಅತ್ಯಂತ ಉಜ್ವಲವಾಗಿ ನೆರವೇರಿದರು.
ಶ್ರೀಪುರಂದರದಾಸರು ಸಾಧಿಸಿದ ಮಹಾತ್ಕಾರವನ್ನು ಮೆಚ್ಹಿಕೊಂಡು ಶ್ರೀವ್ಯಾಸರಾಯರು ಅವರನ್ನು "ದಾಸರೆಂದರೆ ಪುರಂದರದಾಸರಯ್ಯ" ಎಂದು ಪ್ರಶಂಸಿಸಿದಷ್ಟೇ ಅಲ್ಲದೆ ಅವರ ರಚನೆಗಳನ್ನು "ಪುರಂದರೋಪನಿಷತ್ತು" ಎಂದು ಗೌರವಿಸಿರರು.
ಶ್ರೀ ಪುರಂದರದಾಸರು ೪,೭೫,೦೦೦ ಕೃತಿಗಳನ್ನು ರಚಿಸಿದರೆಂದು ತಿಳಿದು ಬರುತ್ತದೆ. ಈಗ ಉಪಲಬ್ಧವಾಗಿರುವ ಅವರ ಕೀರ್ತನೆಗಳ ಸಮುದಾಯವನ್ನು ಸಮೀಕ್ಷಿಸಿದರೆ ಅವರ ಪ್ರಾಸಾದಿಕವಾಣಿಯ ವೈಭವವು ಸ್ವವಿವಿದಿತವಾಗುತ್ತದೆ. ಅವರ ಕೃತಿಗಳಲ್ಲಿ ಸಾಹಿತ್ಯ, ಸಂಗೀತ ಮತ್ತು ಸ್ವಧರ್ಮ ನಿಷ್ಠೆಗಳ ತ್ರಿವೇಣಿ ಸಂಗಮವನ್ನು ಕಾಣಬಹುದು. ಅವರನ್ನು 'ಕರ್ಣಾಟಕ ಸಂಗೀತ ಪಿತಾಮಹ' ಎಂದು ಎಲ್ಲರೂ ಮನ್ನಿಸುವುದುಂಟು. ಸಮಗ್ರ ಹರಿದಾಸ ಸಾಹಿತ್ಯ ಪ್ರಪಂಚದ ಪ್ರತಿನಿಧಿಯಂತಿರುವ ಪುರಂದರದಾಸರನ್ನು "ಪುರಂದರ ಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಂ" ಎಂದು ಹೊಗಳುವುದರಲ್ಲಿ ಯಾವ ಅತಿಶಯೋಕ್ತಿಯೂ ಇಲ್ಲ. ಪುರಂದರದಾಸರು ನಾರದರೆಂದು ಸುಪ್ರಸಿದ್ಧವಾಗಿರುವುದರಿಂದ ಅವರು ಭಕ್ತಿ ಸಂಪನ್ನರು, ಗಾನ ಲೋಲರು.
For more details log on to http://dasavani.blogspot.in/search?updated-min=2007-01-01T00:00:00%2B05:30&updated-max=2008-01-01T00:00:00%2B05:30&max-results=41
ಶ್ರೀನಿವಾಸನಾಯಕರು ಆಗರ್ಭ ಶ್ರೀಮಂತರಾಗಿದ್ದರೂ ತುಂಬ ಜಿಪುಣರಾಗಿದ್ದರು. ಆತನ ಪತ್ನಿ ಸರಸ್ವತಿಬಾಯಿಯಾದರೋ ಪರಮ ದೈವಭಕ್ತಳು. ಶ್ರೀನಿವಾಸನಾಯಕರಿಗೆ ಜ್ನಾನೋದಯವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಭಗವಂತನು ಬಡಬ್ರಾಹ್ಮಣನ ವೇಷವನ್ನು ಧರಿಸಿ ಒಬ್ಬ ಹುಡುಗನೊಂದಿಗೆ ಕೂಡಿ, ತನ್ನ ಮಗನಿಗೆ ಬ್ರಹ್ಮೋಪದೇಶವನ್ನು ಮಾಡಿಸುವ ಸಲುವಾಗಿ ಧನಸಹಾಯ ಮಾಡಬೇಕೆಂದು ಶ್ರೀನಿವಾಸನಾಯಕರಲ್ಲಿ ಬಂದು ಯಾಚಿಸಿದನು.
ಶ್ರೀನಿವಾಸನಾಯಕರು ತಮ್ಮ ಸ್ವಭಾವಕ್ಕೆ ಅನುಗುಣವಾಗಿ, ಆ ಬ್ರಾಹ್ಮಣನನ್ನು ಹಲವಾರು ಬಾರಿ ಅಲೆದಾಡಿಸಿ ಕಡೆಗೆ ಒಂದು ಸವಕಲು ನಾಣ್ಯವನ್ನು ಕೊಟ್ಟರು. ಖಿನ್ನನಾದ ಬಡ ಬ್ರಾಹ್ಮಣನು ಸರಸ್ವತಿಬಾಯಿಯಲ್ಲಿಗೆ ಬಂದು ತನ್ನ ಮನೋಭಿಪ್ರಾಯವನ್ನು ತಿಳಿಸಿದನು. ಆಕೆಯ ಮನಸ್ಸು ಕರಗಿತು. ಮೊದಮೊದಲು ದಿಕ್ಕು ತೋಚದಂತಾಯಿತು. ಕಡೆಗೆ ತನ್ನ ತವರಿನವರು ತನಗೆ ಕೊಟ್ಟಿದ್ದ ಮುತ್ತಿನ ಮೂಗುತಿಯನ್ನು ಆ ಬ್ರಾಹ್ಮಣನಿಗೆ ಕೊಟ್ಟು ಕಳುಹಿಸಿದಳು.
ವೇಶಧಾರಿಯಾದ ಆ ಬ್ರಾಹ್ಮಣನು ಆ ಒಡವೆಯನ್ನು ಅಡವಿಟ್ಟು ಹಣವನ್ನು ಪಡೆಯಲೆಂದು ಶ್ರೀನಿವಾಸರಲ್ಲಿಗೇ ಬಂದನು. ಕುಶಾಗ್ರಮತಿಯಾದ ಶ್ರೀನಿವಾಸನಾಯಕರು, ಆ ಒಡವೆ ಯಾರದಿರಬಹುದೆಂದು ಊಹಿಸಿ, ಒಡನೆಯೇ ಮನೆಗೆ ಬಂದು, ನಿಜವೃತ್ತಾಂತವನ್ನು ತಿಳಿದು, ಹೆಂಡತಿಯನ್ನು ದಂಡಿಸಿದರು.
ಆಕೆ ಅಸಹಾಯಕಳಾಗಿ ಪರಮಾತ್ಮನನ್ನು ಪ್ರಾರ್ಥಿಸಿದಳು. ಗಂಡನ ಆಗ್ರಹವನ್ನು ಎದುರಿಸಲಾಗದೆ, ತನ್ನ ಪ್ರಾಣವನ್ನೇ ತ್ಯಾಗಮಾಡಬೇಕೆಂದು ವಿಷವನ್ನು ಕುಡಿಯಲು ಬಟ್ಟಲನ್ನು ಮೇಲಕ್ಕೆ ಎತ್ತಿದಾಗ ಅದರಲ್ಲಿ ಆಕೆಯ ಮೂಗುತಿ ಬಿದ್ದಿದ್ದು ಗೋಚರಿಸಿತು. ಈ ಸೋಜಿಗವನ್ನು ಮನಗಂಡ ಶ್ರೀನಿವಾಸನಾಯಕರಿಗೆ ತಮ್ಮ ಅಜ್ಞಾನ ಸರಿದು, ಬಂದಾತ ಭಗವಂತನಿರಬೇಕೆಂದು ಧೃಡವಾಯಿತು. ಆ ಕ್ಷಣವೇ ತಮ್ಮ ಆಸ್ತಿ ಪಾಸ್ತಿಗಳೆನ್ನೆಲ್ಲ ಶ್ರಿಷ್ಣಾರ್ಪಣವೆಂದು ದೇವರಿಗೆ ಸಲ್ಲಿಸಿ ವಿರಕ್ತರಾದರು.
"ಆದದ್ದೆಲ್ಲ ಒಳಿತೇ ಆಯಿತು ನಮ್ಮ ಶ್ರೀಧರನ ಸೇವೆಗೆ ಸಾಧನ ಸಂಪತ್ತಾಯಿತು" ಎಂದು ಹಿಗ್ಗಿ ಹಾಡುತ್ತಾ ತಮಗೆ ಜ್ಞಾನೋದಯವನ್ನು ಉಂಟು ಮಾಡಿದ ತಮ್ಮ ಹೆಂಡತಿಯನ್ನು ಮುಕ್ತ ಕಂಠದಿಂದ ಕೊಂಡಾಡಿದರು. ಅನಂತರ ಶ್ರೀವ್ಯಾಸರಾಯರಲ್ಲಿಗೆ ಹೋಗಿ "ಪುರಂದರ ವಿಠಲ" ಎಂಬ ಅಂಕಿತವನ್ನು ಪಡೆದು ತಮ್ಮ ಕೀರ್ತನ ಕೈಂಕರ್ಯವನ್ನು ಅತ್ಯಂತ ಉಜ್ವಲವಾಗಿ ನೆರವೇರಿದರು.
ಶ್ರೀಪುರಂದರದಾಸರು ಸಾಧಿಸಿದ ಮಹಾತ್ಕಾರವನ್ನು ಮೆಚ್ಹಿಕೊಂಡು ಶ್ರೀವ್ಯಾಸರಾಯರು ಅವರನ್ನು "ದಾಸರೆಂದರೆ ಪುರಂದರದಾಸರಯ್ಯ" ಎಂದು ಪ್ರಶಂಸಿಸಿದಷ್ಟೇ ಅಲ್ಲದೆ ಅವರ ರಚನೆಗಳನ್ನು "ಪುರಂದರೋಪನಿಷತ್ತು" ಎಂದು ಗೌರವಿಸಿರರು.
ಶ್ರೀ ಪುರಂದರದಾಸರು ೪,೭೫,೦೦೦ ಕೃತಿಗಳನ್ನು ರಚಿಸಿದರೆಂದು ತಿಳಿದು ಬರುತ್ತದೆ. ಈಗ ಉಪಲಬ್ಧವಾಗಿರುವ ಅವರ ಕೀರ್ತನೆಗಳ ಸಮುದಾಯವನ್ನು ಸಮೀಕ್ಷಿಸಿದರೆ ಅವರ ಪ್ರಾಸಾದಿಕವಾಣಿಯ ವೈಭವವು ಸ್ವವಿವಿದಿತವಾಗುತ್ತದೆ. ಅವರ ಕೃತಿಗಳಲ್ಲಿ ಸಾಹಿತ್ಯ, ಸಂಗೀತ ಮತ್ತು ಸ್ವಧರ್ಮ ನಿಷ್ಠೆಗಳ ತ್ರಿವೇಣಿ ಸಂಗಮವನ್ನು ಕಾಣಬಹುದು. ಅವರನ್ನು 'ಕರ್ಣಾಟಕ ಸಂಗೀತ ಪಿತಾಮಹ' ಎಂದು ಎಲ್ಲರೂ ಮನ್ನಿಸುವುದುಂಟು. ಸಮಗ್ರ ಹರಿದಾಸ ಸಾಹಿತ್ಯ ಪ್ರಪಂಚದ ಪ್ರತಿನಿಧಿಯಂತಿರುವ ಪುರಂದರದಾಸರನ್ನು "ಪುರಂದರ ಗುರುಂ ವಂದೇ ದಾಸಶ್ರೇಷ್ಠಂ ದಯಾನಿಧಿಂ" ಎಂದು ಹೊಗಳುವುದರಲ್ಲಿ ಯಾವ ಅತಿಶಯೋಕ್ತಿಯೂ ಇಲ್ಲ. ಪುರಂದರದಾಸರು ನಾರದರೆಂದು ಸುಪ್ರಸಿದ್ಧವಾಗಿರುವುದರಿಂದ ಅವರು ಭಕ್ತಿ ಸಂಪನ್ನರು, ಗಾನ ಲೋಲರು.
For more details log on to http://dasavani.blogspot.in/search?updated-min=2007-01-01T00:00:00%2B05:30&updated-max=2008-01-01T00:00:00%2B05:30&max-results=41
Bhajane malpoDu, av yeDDe. yeDDe janklena sahavaasa yeDDe. bhajane malpunaklu maaterlaa yeDDe panare saadhya ijji ! aiT kelavu kaas malpuna Dongi janakulu laa uppuver. bhajane da aaratida taTTeg ainoodu roopai dertd paaDunaklu, bhajane aai bokka, aven pira deppujer panpina garantee daala ijji ! ori malla noTu paaDiye panDd, nama paaDare balli, deveren kaas kordu detonare saadhya ijji. bhajane kaaryakramoDu, dakshiNe taTTe uppune ijji, aanDalaa duDDu malpuna birser, ee taTTe deverna yeduru deepere. incha mange malpuna bhajaneg daayeg povoDu ? nama mamma illaDe bhajane daaye malpare balli ?